ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪರ್ವಕಾಲದ ವಾರ್ಷಿಕ ಹಾಲು ಹಬ್ಬಕ್ಕೆ ಬುಧವಾರ ಚಾಲನೆ ನೀಡಲಾಯಿತು.
ದೇವಳದ ಪ್ರಧಾನ ಅರ್ಚಕ ಬಿ. ಕೃಷ್ಣಮೂರ್ತಿ ನಾವಡ ದೀಪ ಬೆಳಗಿಸಿ ಹಾಲು ಹಬ್ಬಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಮಹಾಸತಿ ಅಮ್ಮನವರ ಸೇವಾ ಸಮಿತಿ ಅಧ್ಯಕ್ಷ ನಾಕಟ್ಟೆ ನಾಗರಾಜ ಶೆಟ್ಟಿ, ದೇವಸ್ಥಾನದ ಗೌರವಾಧ್ಯಕ್ಷ ಎಸ್.ರಾಜು ಪೂಜಾರಿ,ಕಾರ್ಯದರ್ಶಿ ಶಿವರಾಮ ಪೂಜಾರಿ ಯಡ್ತರೆ,ನಾಗರಾಜ ಗಾಣಿಗ,ಸದಸ್ಯರಾದ ಶಂಕರ ಮೊಗವೀರ, ಸತ್ಯಪ್ರಸನ್ನ, ಅಣ್ಣಪ್ಪ ಪೂಜಾರಿ (ಪಾತ್ರಿ) ಹಾಜರಿದ್ದರು.ರಾತ್ರಿ ವಿಶೇಷ ಗೆಂಡಸೇವೆ ಸಡಗರದಿಂದ ನಡೆಯಲಿದೆ.
ಗುರುವಾರ ಬೆಳಿಗ್ಗೆ ಶ್ರೀದೇವರಿಗೆ ವಿಶೇಷ ಪೂಜೆ, ಚಂಡಿಕಾಹೋಮ ಹರಕೆ ಕಾಣಿಕೆ ಸಮರ್ಪಣೆ, ಮಧ್ಯಾಹ್ನ 12 ರಿಂದ ತುಲಾಭಾರ ಸೇವೆ, ದರ್ಶನ ಸೇವೆ ನಂತರ ಮಹಾಅನ್ನಸಂತರ್ಪಣೆ ನಡೆಯಲಿದೆ.ಸಾವಿರಾರು ಭಕ್ತರು ಈ ದೇವತಾ ಕಾರ್ಯದಲ್ಲಿ ಭಾಗವಹಿಸಿ ಶ್ರೀದೇವರ ದರ್ಶನ ಪಡೆದರು.