ಬೈಂದೂರು; ಶ್ರೀ ಬ್ರಹ್ಮಲಿಂಗೇಶ್ವರ ಪ್ರೆಂಡ್ಸ್ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ಸವಿತಾ ಸಮಾಜ ಕ್ಷೌರಿಕ ವೃತ್ತಿನಿರತರ 40 ಗಜಗಳ ಕ್ರಿಕೆಟ್ ಪಂದ್ಯಾಟ ಶ್ರೀ ಬ್ರಹ್ಮಲಿಂಗೇಶ್ವರ ಟ್ರೋಪಿ -2026 ಮಾರ್ಚ್ 03 ರಂದು ಪೂರ್ವಾಹ್ನ 9:30ಕ್ಕೆ ನಾಗೂರು ಗುಂಜಾನುಗುಡ್ಡೆ ಮೈದಾನ ನಾಗೂರಿನಲ್ಲಿ ನಡೆಯಲಿದೆ.ಬೈಂದೂರು ಕ್ಷೇತ್ರದ ಮಾಜಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಬ್ರಹ್ಮಲಿಂಗೇಶ್ವರ ಪ್ರೆಂಡ್ಸ್ ಅಧ್ಯಕ್ಷ ಉಮೇಶ ಭಂಡಾರಿ ಅಧ್ಯಕ್ಷತೆ ವಹಿಸಲಿದ್ದು ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.ಸಂಜೆ ಸಮಾರೋಪ ಸಮಾರಂಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದು ಮುಂತಾದ ಗಣ್ಯರು ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
