ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ 2022-23ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಶಿರೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತ ಭಟ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲ ನಾಗರಾಜ  ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಆಸಕ್ತಿಯಿಂದ ಕಲಿಕೆಯ ಜೊತೆಗೆ ಆಸರೆಯಾಗುವ ಸ್ಪರ್ಧಾತ್ಮಕ ಜ್ಞಾನವನ್ನು ಪಡೆದು ಉನ್ನತ ಮಟ್ಟದ ಶಿಕ್ಷಣ ಪಡೆದು ಸಮುದಾಯದ ಏಳಿಗೆಗೆ ಸಹಕಾರಿಯಾಗಬೇಕಾಗಿದೆ.ಮಕ್ಕಳು ಪ್ರತಿಭೆಯ ಜೊತೆಗೆ ವಿವೇಕವಂತರಾಗಿರಬೇಕು.ಮಕ್ಕಳನ್ನು ಈ ಸಮಾಜಕ್ಕೆ ಆಸ್ತಿಯನ್ನಾಗಿ ಮಾಡಬೇಕು ಎಂದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ಮಂಜುನಾಥ ಪೈ,ಗ್ರಾ.ಪಂ ಸದಸ್ಯ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಉಪಪ್ರಾಂಶುಪಾಲ ಬೊಮ್ಮಯ್ಯ ಗಾಂವ್ಕರ್,ಹಿರಿಯ ಉಪನ್ಯಾಸಕ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕಿ ಹಾಗೂ ಪಿ.ಎಚ್.ಡಿ ಪದವಿ ಪಡೆದ ಸುಮೇಯಾ ನಾಜಾ ರವರನ್ನು ಕಾಲೇಜಿನ ವತಿಯಿಂದ ಸಮ್ಮಾನಿಸಲಾಯಿತು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಉಪನ್ಯಾಸಕ ದೇವೇಂದ್ರ ಕೆ.ಮೊಗೇರ್ ಸ್ವಾಗತಿಸಿದರು.ಮಂಜುನಾಥ ನಾಯ್ಕ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

News/pic: Girish shiruru

 

Leave a Reply

Your email address will not be published.

11 − 7 =