ಬೈಂದೂರು;  ರಾಜ್ಯ ಸರಕಾರದ ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೈಂದೂರು ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ನೇತ್ರತ್ವ ವಹಿಸಿ ಮಾತನಾಡಿದ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮದನ್ ಕುಮಾರ್  ಮಾತನಾಡಿ ಬಿಜೆಪಿ ಸರಕಾರ ಅಧಿಕಾರ ಅವಧಿಯಲ್ಲಿ ಹಗರಣವನ್ನು ಹೊರತುಪಡಿಸಿದರೆ ಮತ್ತೇನು ಸಾಧನೆ ಮಾಡಿಲ್ಲ.ಹಾಲಿ ಬಿಜೆಪಿ ಶಾಸಕರ ಮನೆಯಲ್ಲಿ ಎಂಟು ಕೋಟಿ ನಗದು ದೊರೆತರು ಸಹ ರಾಜಕೀಯ ಪ್ರಭಾವ ಬಳೆಸಿ ಪ್ರಕರಣದ ದಾರಿ ತಪ್ಪಿಸುವ ಇವರ ನೈಜತೆಯನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕಾಗಿದೆ.ಹೀಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯ ಬಂದ್ ಪ್ರತಿಭಟನೆಗೆ ಕರೆ ನೀಡಿದ್ದು ಕಮಿಷನ್ ದಂದೆ ಹಾಗೂ ಭ್ರಷ್ಟಾಚಾರ ಬಿಜೆಪಿಯ ಸಾಧನೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ,ಕಾರ್ಯದರ್ಶಿ ನಾಗರಾಜ ಗಾಣಿಗ,ಎಸ್.ಪ್ರಕಾಶ್ಚಂದ್ರ ಶೆಟ್ಟಿ,ಮಣಿಕಂಠ ಎಸ್,ಶೇಖರ ಪೂಜಾರಿ ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.

 

 

Leave a Reply

Your email address will not be published.

9 + five =