ಬೈಂದೂರು: ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಟಗಳ ಒಕ್ಕೂಟ ಕೇಂದ್ರ ಸಮಿತಿ ಇದರ ಸಹಯೋಗದೊಂದಿಗೆ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮ ಶ್ರೀ ಗೋಪಾಲಕೃಷ್ಣ ಸಭಾಭವನ ನಾಗೂರಿನಲ್ಲಿ ನಡೆಯಿತು.

ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಸಮಾರಂಭವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಉದ್ಘಾಟಿಸಿದರು.

ಕೇಂದ್ರ ಸಮಿತಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ರಘುರಾಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಕರಾವಳಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಪದಗ್ರಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ನೂತನ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ವಾಸು ಮೇಸ್ತ ಇವರಿಗೆ ರಘುರಾಮ ಕೆ.ಪೂಜಾರಿ ನೇತೃತ್ವದ ಪದಾಧಿಕಾರಿಗಳ ತಂಡಕ್ಕೆ ಅಧಿಕಾರ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ  ಶೇಖರ ಖಾರ್ವಿ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ, ಬೈಂದೂರು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಕೃಷ್ಣ ಪೂಜಾರಿ, ಕಾರ್ಯದರ್ಶಿ ಮಂಜುನಾಥ, ಮೂಕಾಂಬಿಕ ಭತ್ತ ಒಕ್ಕೂಟದ ಅಧ್ಯಕ್ಷ ಚಂದ್ರ ಪೂಜಾರಿ, ಉಪಾಧ್ಯಕ್ಷ ಮಂಜಯ್ಯ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಪ್ರವೀಣ್ ಮೊವಾಡಿ, ಸಭಾಭವನದ ಮಾಲಕ ಮಂಜುನಾಥ ಉಡುಪ, ಕೇಂದ್ರ ಸಮಿತಿ ಪೂರ್ವಾಧ್ಯಕ್ಷರಾದ ನಾರಾಯಣ ಕೆ. ಗುಜ್ಜಾಡಿ, ಕೃಷ್ಣ ಪೂಜಾರಿ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ರಾಮ ಮೇಸ್ತ, ಮಹಾಬಲೇಶ್ವರ ಆಚಾರ್ಯ, ಶಿವರಾಜ್ ಪೂಜಾರಿ, ಶರತ್ ಶೆಟ್ಟಿ, ಗಣಪಯ್ಯ ಶೆಟ್ಟಿ, ವಾಸು ಆಚಾರ್ಯ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಕೆ. ವಿನಾಯಕ ಪೈ.ಸ್ವಾಗತಿಸಿದರು.ನಿಕಟಪೂರ್ವ ವಲಯಾಧ್ಯಕ್ಷ ದಿನೇಶ ಆಚಾರ್ಯ ವರದಿ ಮಂಡಿಸಿದರು.ಮೇಲ್ವಿಚಾರಕಿ ಸಂಗೀತ, ಪಾರ್ವತಿ ಕೃಷಿ ಮೇಲ್ವಿಚಾರಕ ರಾಜು ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published.

1 × one =