ಬೈಂದೂರು; ಬೈಂದೂರಿನಲ್ಲಿ ನೂತನವಾಗಿ ಶುಭಾರಂಭಗೊಂಡ ಶ್ರೀ ಮೂಕಾಂಬಿಕಾ ಕನ್‍ಸ್ಟ್ರಕ್ಷನ್ ಕಛೇರಿ ಉದ್ಘಾಟನಾ ಸಮಾರಂಭ ಶುಕ್ರವಾರ ಶ್ರೀ ಸಾಯಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಹೆಗಡೆ ಮೂಕಾಂಬಿಕಾ ಕನ್‍ಸ್ಟ್ರಕ್ಷನ್ ಕಛೇರಿ ಉದ್ಘಾಟಿಸಿ ಶುಭಹಾರೈಸಿದ್ದರು.

ಈ ಸಂದಭ೯ದಲ್ಲಿ ಹಿರಿಯರಾದ ಭೋಜರಾಜ್ ಶೆಟ್ಟಿ,ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಯಡ್ತರೆ ಅಧ್ಯಕ್ಷ ನಾರಾಯಣ ಹೆಗ್ಡೆ ತಗ್ಗರ್ಸೆ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಸುಪ್ರೀತಾ ದೀಪಕ್ ಕುಮಾರ್ ಶೆಟ್ಟಿ, ಉಪ್ಪುಂದ ಮಹಾಲಿಂಗೇಶ್ವರ ಕನ್‍ಸ್ಟ್ರಕ್ಷನ್ ಮುಖ್ಯಸ್ಥ ಜಿ ಗೋಕುಲ್ ಶೆಟ್ಟಿ ಇದ್ದರು.

ಬೈಂದೂರು ಶ್ರೀ ಮೂಕಾಂಬಿಕಾ ಕನ್‍ಸ್ಟ್ರಕ್ಷನ್ ಮುಖ್ಯಸ್ಥ ಸುಜೇಂದ್ರ ಡಿ. ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದ್ದರು. ದಿಶನ್ ಡಿ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

20 + 1 =