ಬೈಂದೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾಂಶುಪಾಲರಿಗೆ ಸೇವೆ ಸಲ್ಲಿಸಿ ಪ್ರಸ್ತುತ ನಾವುಂದ ಸ.ಪ.ಪೂ ಕಾಲೇಜಿಗೆ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡ ಸುಜಾತ ಭಟ್ ಇವರು ಬೀಳ್ಕೋಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅವರನ್ನು ಕಾಲೇಜು,ಫ್ರೌಢಶಾಲಾ ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ವತಿಯಿಂದ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ,ಕಾಲೇಜು ಅಭಿವೃದ್ದಿ ಸಮಿತಿಯ ಮಂಜುನಾಥ ಪೈ,ರವೀಂದ್ರ ಶೆಟ್ಟಿ ಹೊಸ್ಮನೆ,ರವೀಂದ್ರ ಶೆಟ್ಟಿ ಹೊನ್ಕೇರಿ,ಅನ್ನಪೂರ್ಣ ಮೇಸ್ತ,ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್,ಉಪಪ್ರಾಂಶುಪಾಲ ಬೊಮ್ಮಯ್ಯ ಗಾಂವ್ಕರ್,ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

Leave a Reply

Your email address will not be published. Required fields are marked *

9 − one =

You missed