ಶಿರೂರು :ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮ್ರತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.
ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನು ಮೊಹಮದ್ ಶಫಾನ್ (13) ಮ್ರತಪಟ್ಟ ದುರ್ದೈವಿಗಳಾಗಿದ್ದಾರೆ.
ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ ಇಬ್ಬರಿಗೂ ಅಷ್ಟೇನು ಈಜಲು ಬಾರದ ಕಾರಣ ಮುಳುಗಿ ಮ್ರತಪಟ್ಟಿದ್ದಾರೆ.ಮಂಗಳವಾರ ವಿಪರೀತ ಮಳೆ ಇರುವ ಕಾರಣ ಕರೆಯ ಸಮೀಪ ಜನ ಇದ್ದಿರಲಿಲ್ಲ.ಸಂಜೆ ವರಗೂ ಮನೆಗೆ ಬಾರದಿರುವ ಕಾರಣ ಆರಕ್ಷಕ ಠಾಣೆಯಲ್ಲಿ ದೂರು ನೀಡಿದ್ದು ಬಳಿಕ ಕೆರೆಯ ಬಳಿ ಪತ್ತೆಯಾಗಿದೆ.

ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

three + eleven =