ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಪುನರಾರಂಭಿಸುವ ನಿಟ್ಟಿನಲ್ಲಿ ಕಾಂಗ್ರೇಸ್ ಪಕ್ಷದ ನಾಯಕರು ಹಾಗೂ ಬಿಜೆಪಿಯ ಕ್ಷೇತ್ರಾಧ್ಯಕ್ಷರು ಪಕ್ಷಬೇದ ಮರೆತು ಸಮಸ್ಯೆ ಬಗೆಹರಿಸುವ ಪ್ರಯತ್ನ ಪಟ್ಟರೆ ಬೈಂದೂರು ಶಾಸಕರು ಮಾತ್ರ ರಾಜಕೀಯ ಲಾಭ .ಪ್ರಚಾರದ ಉದ್ದೇಶದಿಂದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬೈಂದೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅರವಿಂದ ಪೂಜಾರಿ ಹೇಳಿದ್ದಾರೆ.ಕಳೆದ ಹಲವು ತಿಂಗಳಿನಿಂದ ಕೆಂಪುಕಲ್ಲು ಗಣಿಗಾರಿಕೆ ಸ್ಥಗಿತಗೊಂಡಿದೆ.ಈ ಕುರಿತು ಜಿಲ್ಲಾಡಳಿತದ ಗಮನ ಸೆಳೆಯುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ನಿರ್ಣಯಿಸಿ ಡಿ. 7 ರಂದು ಬೈಂದೂರು ತಹಶೀಲ್ದಾರ ರವರಿಗೆ ಮನವಿ ಸಲ್ಲಿಸಲಾಗಿದೆ.ಆದರೆ ಈ ಸಂದರ್ಭ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆಯವರು ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಬದ್ದರಾಗದೇ ಪ್ರತಿಭಟನೆಯ ನೆಪದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಇದರಿಂದಾಗಿ ಬಡಜನರ ಸಮಸ್ಯೆ ಪರಿಹಾರಕ್ಕಾಗಿ ಸರಕಾರದ ಗಮನ ಸೆಳೆಯಲು ಕಲ್ಲು ಕೋರೆ ಮಾಲಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ ಯಶಸ್ವಿ ಜಾಥಾದಲ್ಲಿ ಅನಗತ್ಯ ಗೊಂದಲ ಉಂಟಾಗುವಂತೆ ಮಾಡಿದ್ದಾರೆ ಎಂದರು.ಅವರು ಮಂಗಳವಾರ ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೆಂಪುಕಲ್ಲು ಗಣಿಗಾರಿಕೆ ಪುನರ್ ಆರಂಭಿಸುವ ಬಗ್ಗೆ ವಾರದ ಹಿಂದೆ ಶಾಸಕ ಗುರುರಾಜ ಗಂಟಿಹೊಳೆ , ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ ಯವರ ನೇತೃತ್ವದಲ್ಲಿ ಲಾರಿ ಮತ್ತು ಕೆಂಪುಕಲ್ಲು ಕೋರೆ ಮಾಲಕರ ಸಭೆ ನಡೆಸಲಾಗಿದ್ದು.ಆ ಸಭೆಯಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಿದಾಗ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ನಿರ್ಣಯಿಸಿ ಡಿ. 7 ರಂದು ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು. ಅದರಂತೆ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಲು ಎಲ್ಲಾ ಪಕ್ಷದ ನಾಯಕರು ಪಕ್ಷಾತೀತವಾಗಿ ಬೈಂದೂರು ಸರ್ಕಲ್‌ನಿಂದ ಮೆರವಣೆಗೆಯ ಮೂಲಕ ಬೈಂದೂರು ತಾಲೂಕು ಆಡಳಿತ ಸೌಧಕ್ಕೆ ಸಾಗುತ್ತಿರುವಾಗ ಶಾಸಕರು ತಮ್ಮ ಬೆಂಬಲಿಗರೊಂದಿಗೆ ಮಧ್ಯ ಪ್ರವೇಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿದೆ.ಕಾನೂನಿನ ತೊಡಕಿನಿಂದಾಗಿ ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಮನವಿ ನೀಡಿ ಸಂಬಂಧಿಸಿದವರ ಗಮನ ಸೆಳೆಯಬೇಕೆ ಹೊರತು ಏಕಾಏಕಿ ಪ್ರತಿಭಟನೆಯ ಹಾದಿ ಹಿಡಿದಿರುವುದು ಸರಿಯಲ್ಲ ಎಂದರು.

ಗಣಿಗಾರಿಕೆ ಆರಂಭಕ್ಕೆ ಬದ್ದ; ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ ಪುನರ್ ಆರಂಭಿಸುವ ಬಗ್ಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರು ಈಗಾಗಲೇ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ಬೆಳಗಾವಿ ಅಧಿವೇಶನದಲ್ಲಿ ಕೆಂಪುಕಲ್ಲು ಕೋರೆ ಮಾಲಕರ ನಿಯೋಗವನ್ನು ಗಣಿ ಸಚಿವ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿಸಿ ಅವರಿಗೆ ಇಲ್ಲಿನ ಕೂಲಿ ಕಾರ್ಮಿಕರ ಸಂಕಷ್ಟದ ಬಗ್ಗೆ ಮನವರಿಕೆ ಮಾಡಿಸಲಿದ್ದಾರೆ.ಡಿ. 15 ರೊಳಗೆ ಕೆಂಪುಕಲ್ಲು ಗಣಿಗಾರಿಕೆ ಪುನರ್ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಉದ್ಯಮಿ ವಿಜಯ ಶೆಟ್ಟಿ ಮಾತನಾಡಿ ಅತ್ಯಂತ ಶಿಸ್ತಿನಿಂದ ಎರಡು ಪಕ್ಷದ ನಾಯಕರು ಮಾತುಕತೆ ನಡೆಸಿ ಸರಕಾರದ ಗಮನ ಸೆಳೆಯುವ ಮೂಲಕ ಮನವಿ ನೀಡಿ ಬಹುದಿನದಿಂದ ಸ್ಥಗಿತಗೊಂಡಿರುವ ಕಲ್ಲು ಕೋರೆ ಪುನರಾರಂಭಿಸುವ ಪ್ರಯತ್ನಕ್ಕೆ ಶಾಸಕರ ದುಡುಕು ನಿರ್ಧಾರ ಹಾಗೂ ಕಲ್ಲು ಕೋರೆ ಲಾರಿ ಮಾಲಕರ ಸಂಘದ ಅಧ್ಯಕ್ಷ ಎಂದು ಹೇಳುತ್ತಿರುವ ದಿವಾಕರ ಶೆಟ್ಟಿಯವರ ವಯಕ್ತಿಕ ಹಿತಾಸಕ್ತಿ ಮತ್ತು ರಾಜಕಿಯ ಈ ಗೋಂದಲಕ್ಕೆ ಕಾರಣವಾಗಿದೆ. ಮಾತ್ರವಲ್ಲದೆ ಬಡಜನರ ಸಮಸ್ಯೆ ಪರಿಹರಿಸುವ ಪ್ರಯತ್ನ ಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರದ ಲಾಭ ಪಡೆಯುವ ಸ್ವಾರ್ಥ ಎದ್ದು ಕಾಣುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಲಾರಿ ಮತ್ತು ಕೆಂಪುಕಲ್ಲು ಕೋರೆ ಮಾಲಕ ವಿಜಯ ಶೆಟ್ಟಿ, ಸದಾಶಿವ ಡಿ. ಪಡುವರಿ, ನಾಗರಾಜ ಗಾಣಿಗ, ಜಗದೀಶ ದೇವಾಡಿಗ, ವೀರಭದ್ರ ಗಾಣಿಗ ಉಪಸ್ಥಿತರಿದ್ದರು.

News; shiruru News.com

Leave a Reply

Your email address will not be published. Required fields are marked *

4 + 12 =