ಉಪ್ಪುಂದ. ಜ. 8; ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ನೇತೃತ್ವದಲ್ಲಿ ಅವೈಜ್ಞಾನಿಕ ಮೀನುಗಾರಿಕೆಯಾದ ಬೆಳಕು ಮತ್ತು ಬುಲ್ ಟ್ರಾಲ್ಮೀನುಗಾರಿಕೆ ನಿಷೇಧದ ಅನುಷ್ಠಾನಕ್ಕಾಗಿ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡುವುದರ ಬಗ್ಗೆ ಜ.10ರಂದು ತ್ರಾಸಿ ಬೀಚ್ ನಲ್ಲಿ ನಡೆಯುವ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆಗೆ ಮೂರು ಜಿಲ್ಲೆಗಳ ನಾಡದೋಣಿ ಮೀನುಗಾರಿಕೆಗೆ ರಜೆ ಘೋಷಣೆ ಮಾಡಲಾಗಿದ್ದು 3 ಜಿಲ್ಲೆಯ ಮೀನುಗಾರರು ಬ್ರಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಅಧ್ಯಕ್ಷ ಅಳ್ವಿಕೋಡಿ ನಾಗೇಶ್ ಖಾರ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.