ಬೈಂದೂರು: ಐತಿಹಾಸಿಕ ಪ್ರಸಿದ್ಧ ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಇದರ ನೂತನ ಸದಸ್ಯರಾಗಿ ಬಿ. ದೊಟ್ಟಯ್ಯ ಪೂಜಾರಿ ಅವರು ನೇಮಕಗೊಂಡಿದ್ದಾರೆ.ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಬಿ. ದೊಟ್ಟಯ್ಯ ಪೂಜಾರಿ ಅವರು ಸೌತ್ ಕೆನರಾ ಪೋಟೋಗ್ರಾರ್ಸ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ನಿಕಟಪರ್ವ ಅಧ್ಯಕ್ಷರಾಗಿದ್ದಾರೆ ಹಾಗೂ ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.