ಬೈಂದೂರು: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ಇರಿಸಿದ್ದ KA 20 MF 3378 ನೇ ಮಾರುತಿ ಸಿಫ್ಟ್ ಕಾರು (ಅಂದಾಜು ಮೌಲ್ಯ 8 ಲಕ್ಷ ದಿನಾಂಕ 01.05.2025 ರಂದು ಬೆಳಗಿನ ಜಾವ 4.30 ಗಂಟೆಗೆ ಕಳವಾಗಿದ್ದು ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ರವರು ನೀಡಿರುವ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 83/2025 ಕಲಂ 303 (2) ರಂತೆ ಪ್ರಕರಣ ದಾಖಲಾಗಿರುತ್ತದೆ.ಈ ಪ್ರಕರಣದ ಪತ್ತೆಗಾಗಿ ಶ್ರೀ ಹೆಚ್.ಡಿ. ಕುಲಕರ್ಣಿ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗರವರ ಮಾರ್ಗದರ್ಶನದಲ್ಲಿ, ಸವೀತೃತೇಜ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ರವರ ನೇತ್ರತ್ವದಲ್ಲಿ, ಬೈಂದೂರು ಠಾಣೆಯ ಪಿ.ಎಸ್.ಐ ತಿಮ್ಮೇಶ್ ಬಿ.ಎನ್ ಮತ್ತು ನವೀನ ಪಿ. ಬೋರಕರ ಬೈಂದೂರು ಠಾಣೆಯ ಸಿಬ್ಬಂದಿಯವರಾದ ಚಿದಾನಂದ, ಮಾಳಪ್ಪ, ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿಯವರಾದ ರವೀಂದ್ರ ವಿಶೇಷ ತಂಡವನ್ನು ರಚಿಸಲಾಗಿತ್ತು. ವಿಶೇಷ ತಂಡ ದಲ್ಲಿದ್ದ ಅಧಿಕಾರಿ ಮತ್ತು ಸಿಬ್ಬಂದಿಯರು ದಿನಾಂಕ 02.05.2025 ರಂದು ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಾದೀನಪಡಿಸಿಕೊಂಡಿರುತ್ತಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.ರಕ್ಷಕ್ ನೆಟ್ವರ್ಕ್ ಅ್ಯಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಡಾ.ಅರುಣ್ ಕೆ. ಐ.ಪಿ.ಎಸ್. ರವರು ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ ನಾಯ್ಕ ಮತ್ತು ಪರಮೇಶ್ವರ ಹೆಗಡೆ ರವರು ಅಭಿನಂದಿಸಿರುತ್ತಾರೆ.

Leave a Reply

Your email address will not be published. Required fields are marked *

1 × 5 =