ಬೈಂದೂರು: ರೈತ ಸಂಘ ಬೈಂದೂರು ಇದರ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೇತ್ರತ್ವದಲ್ಲಿ ನಡೆಯುತ್ತಿರುವ ಅನಿಧಿ೯ಷ್ಟಾವಧಿ ಧರಣಿ 17ನೇ ದಿನಕ್ಕೆ ಕಾಲಿಟ್ಟಿದೆ.ಮೀನುಗಾರಿಕಾ,ಬಂದರು,ಒಳನಾಡು ಹಾಗೂ ಜಲಸಾರಿಗೆ ಸಚಿವ ಎಸ್.ಮಂಕಾಳ ವೈದ್ಯ ಬುಧವಾರ ಧರಣಿ ನಡೆಯುತ್ತಿರುವ ಸ್ಥಳಕ್ಕೆ ರೈತರನ್ನು ಬೇಟಿ ಮಾಡಿ ಬಳಿಕ ರೈತರನ್ನುದ್ದೇಶಿಸಿ ಮಾತನಾಡಿದ ಆವರು ಈಗಾಗಲೇ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಯವರು ಈ ಕುರಿತು ವಿಷಯವನ್ನು ತಿಳಿಸಿದ್ದಾರೆ.ರೈತರ ಹೋರಾಟ ನ್ಯಾಯ ಸಮ್ಮತವಾಗಿದೆ.ಜಿಲ್ಲಾಧಿಕಾರಿಗಳು ಕಳಿಸಿರುವ ವರದಿಯನ್ನು ಆಧರಿಸಿ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ.ರಾಜ್ಯದ ಮುಖ್ಯಮಂತ್ರಿಗಳು ರೈತರ ಪರ ಇರುವುದರಿಂದ ಖಂಡಿತ ನ್ಯಾಯ ದೊರಕುತ್ತದೆ ಎಂದರು ಮತ್ತು ಧರಣಿಯನ್ನು ಕೈಬಿಡಲು ಕೇಳಿಕೊಂಡರು.ಇದಕ್ಕೆ ಪ್ರತಿಕ್ರಯಿಸಿದ ರೈತರು ನಮ್ಮ ಧರಣಿ ನ್ಯಾಯಪರ ಆಗ್ರಹ ಬಿಟ್ಟರೆ ಇತರ ಯಾವುದೇ ಉದ್ದೇಶಗಳಿಲ್ಲ.ಹೀಗಾಗಿ ಸಚಿವಾಲಯ, ಸರಕಾರ ಹಾಗೂ ಜಿಲ್ಲಾಡಳಿತದಿಂದ ಲಿಖಿತ ಉತ್ತರ ದೊರಕಿದರೆ ಧರಣಿ ಕೈಬಿಡಲು ಸಿದ್ದರಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಶಿರೂರು ರೈತ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ,ಹರೀಶ್ ತೋಳಾರ್,ರಘುರಾಮ ಕೆ.ಪೂಜಾರಿ,ಸುಭಾಷ ಗಂಗನಾಡು,ಮ್ಯಾಥ್ಯೂ ಕೆ.ಎಸ್,ರವೀಂದ್ರ ಶೆಟ್ಟಿ ಪಟೇಲ್,ಹೆರಿಯ ಪೂಜಾರಿ,ಚಿಕ್ಕು ಪೂಜಾರಿ,ಪದ್ಮಾಕ್ಷ ಗೋಳಿಬೇರು,ಕೃಷ್ಣ ದೇವಾಡಿಗ,ಸುಽರ್ ಪೂಜಾರಿ,ದೊಟ್ಟಯ್ಯ ಪೂಜಾರಿ,ವೆಂಕಟ ಪೂಜಾರಿ ಶಿರೂರು ಮೊದಲಾದವರು ಹಾಜರಿದ್ದರು.

ಅರುಣ್ ಕುಮಾರ್ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವೀರಭದ್ರ ಗಾಣಿಗ ಕಾರ್ಯಕ್ರಮ ನಿರೂಪಿಸಿದರು.
ವರದಿ/ಗಿರಿ ಶಿರೂರು