ಬೈಂದೂರು: ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿ ಕೇಂದ್ರದ ರ ವಾರ್ಡ್ ಸಭೆ ಶಿರೂರು ಹಡವಿನಕೋಣೆ ಗಣೇಶ ಯುವಕ ಮಂಡಳಿ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಶಕ್ತಿ ಕೇಂದ್ರದ ಸದಸ್ಯರೊಂದಿಗೆ ಚರ್ಚಿಸಲಾಯಿತು.
ಶಿರೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಮೊಗವೀರ ಉಪ್ಪುಂದ,ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ,ಬೈಂದೂರು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಗೋಪಾಲ ಪೂಜಾರಿ ವಸ್ರೆ,ಬೂತ್ ಅಧ್ಯಕ್ಷರಾದ ಮಂಗಳು ಬಿಲ್ಲವ,ಅಣ್ಣಪ್ಪ ಮೇಸ್ತ,ಭಾಸ್ಕರ ಶೆಟ್ಟಿ,ಮಂಜುನಾಥ ಮೇಸ್ತ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.