ಬೈಂದೂರು: ಸುರಭಿ (ರಿ.) ಬೈಂದೂರು ಸಾಂಸ್ಕ್ರತಿಕ,ಸಾಹಿತ್ಯ,ಸೇವಾ ಪ್ರತಿಷ್ಠಾನ ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಡಿಸೆಂಬರ್ 14 ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಸಂಜೆ 07 ಗಂಟೆಗೆ ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ಸಭಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ತಿಳಿಸಿದ್ದಾರೆ ಅವರು ಗುರುವಾರ ಬೈಂದೂರು ರೋಟರಿ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ನಮ್ಮ ಸಂಸ್ಥೆ ಬೆಳ್ಳಿಹಬ್ಬದ ವರ್ಷವನ್ನು ಸಂಭ್ರಮಿಸುತ್ತಿದ್ದು, ವರ್ಷವಿಡಿ ವಿವಿಧ ಸಾಂಸ್ಕೃತಿಕ ಸಾಹಿತಿಕ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಯುತ್ತಿದ್ದು ಡಿಸೆಂಬರ್ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯನ್ನು ಆಯೋಜಿಸಿದೆ. ಡಿಸೆಂಬರ್ 14 ರಂದು ಆದಿತ್ಯವಾರ ರಂಗಾಯಣ ಟ್ರಸ್ಟ್ ಮೈಸೂರು ಪ್ರಸ್ತುತಿಯ ನಾಟಕ ಚಾಮಚೆಲುವೆ ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 15 ರಂದು ಸೋಮವಾರ ಕಲಾರೋಹಣ ಶಿವಮೊಗ್ಗ ಪ್ರಸ್ತುತಿಯ ನಾಟಕ ನನ‰ ನನಮ್ ರಸ್ತೆ ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 16 ರಂದು ಮಂಗಳವಾರ ಸುಮನಸ ಕೊಡವೂರು ಉಡುಪಿ ಪ್ರಸ್ತುತಿಯ ನಾಟಕ ಈದಿ ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 17ರ ಬುಧವಾರ ಅದಮ್ಯ ರಂಗ ಸಂಸ್ಕೃತಿ ಟ್ರಸ್ಟ್ ಬೆಂಗಳೂರು ಪ್ರಸ್ತುತಿಯ ನಾಟಕ ಮಾರಿಕಾಡು ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 18 ರಂದು ಗುರುವಾರ ಸಹ್ಯಾದ್ರಿ ರಂಗತಂಡ ಶಿವಮೊಗ್ಗ ಪ್ರಸ್ತುತಿಯ ನಾಟಕ ರಾವಿ ನದಿಯ ದಂಡೆಯಲ್ಲಿ ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 19ರ ಶುಕ್ರವಾರ ಸ್ಪಂದನ ಸಾಗರ ಪ್ರಸ್ತುತಿಯ ನಾಟಕ ಪ್ರಾಣ ಪದ್ಮಿನಿ ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 20 ರಂದು ಶನಿವಾರ ಕ್ರಾನಿಕಲ್ಸ್ ಆಫ್ ಇಂಡಿಯಾ ರಿ. ಬೆಂಗಳೂರು ಪ್ರಸ್ತುತಿಯ ನಾಟಕ ಶಿವೋಹಂ ಪ್ರದರ್ಶನಗೊಳ್ಳಲಿದೆ. ಡಿಸೆಂಬರ್ 21 ರಂದು ಆದಿತ್ಯವಾರ ನಮ್ದೇ ನಟನೆ ರಿ. ಬೆಂಗಳೂರು ಪ್ರಸ್ತುತಿಯ ನಾಟಕ ಮಗಳೆಂಬ ಮಲ್ಲಿಗೆ ನಾಟಕ ಪ್ರದರ್ಶನಗೊಳ್ಳಲಿದೆ ಎಂಟು ದಿನಗಳ ಈ ನಾಟಕೋತ್ಸವ ಕಾರ್ಯಕ್ರಮದಲ್ಲಿ ತಾವೆಲ್ಲರೂ ಉಪಸ್ಥಿತರಿರಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ, ಉಪಾಧ್ಯಕ್ಷರಾದ ಲಕ್ಷ್ಮಣ ಕೊರಗ ಬೈಂದೂರು, ಸುರೇಶ್ ಹುದಾರ್ ಯಡ್ತರೆ, ಸಂಘಟನಾ ಕಾರ್ಯದರ್ಶಿ ವೆಂಕಟರಮಣ ಜಿ. ಮಯ್ಯಾಡಿ, ಕಾರ್ಯಕಾರಿ ಸಮಿತಿ ಸದಸ್ಯ ವಾಸುದೇವ ಪಡುವರಿ ಉಪಸ್ಥಿತರಿದ್ದರು.
ಸುರಭಿ ರಿ. ಬೈಂದೂರು ನಿರ್ದೇಶಕ ಸುಧಾಕರ ಪಿ ಬೈಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
