ಬೈಂದೂರು; ರಂಗಭೂಮಿ ಎನ್ನುವುದು ರಂಗಸಜ್ಜಿಕೆಗೆ ಮಾತ್ರ ಸೀಮಿತವಲ್ಲ.ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ ನಾಟಕಗಳಿಂದ ದೊರೆಯುತ್ತದೆ.ಜಗತ್ತಿಗೆ ಭಾರತ ದೇಶ ಪ್ರೇರಣೆಯಾಗಿದೆ.ನಾಟಕಗಳು ಜನಜಾಗ್ರತಿ ಮೂಲಕ ಸಮಾಜದಲ್ಲಿ ಬದಲಾವಣೆ ತಂದಿದೆ.ಕಲೆ ಮತ್ತು ಆಸಕ್ತಿ ಸದಾ ಕ್ರಿಯಾತ್ಮಕ ಚಿಂತನೆ ಮತ್ತು ಸಕರಾತ್ಮಕವಾದ ಪ್ರಗತಿಗೆ ದಾರಿಯಾಗಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು ಅವರು ಸುರಭಿ (ರಿ.)ಬೈಂದೂರು ಇದರ ಬೆಳ್ಳಿಹಬ್ಬದ ಸಂಭ್ರಮದ ಪ್ರಯುಕ್ತ ಬೈಂದೂರು ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ಸಭಾ ವೇದಿಕೆಯಲ್ಲಿ 8 ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ,ಉದ್ಯಮಿ ಇರ್ಷಾದ್ ಸಾಹೇಬ್ ನಾಗೂರು,ಉದ್ಯಮಿ ಬಿಂದುಮನೆ ಕೃಷ್ಣ ಮೊಗವೀರ,ಉದ್ಯಮಿ ಕೃಷ್ಣಯ್ಯ ಮದ್ದೋಡಿ,ಕೃಷ್ಣಮೂರ್ತಿ ಉಡುಪ ಉಪಸ್ಥಿತರಿದ್ದರು.




ನಿರ್ದೇಶಕ ಸುಧಾಕರ ಪಿ ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು.ಭಾಸ್ಕರ ಬಾಡ ಕಾರ್ಯಕ್ರಮ ನಿರೂಪಿಸಿದರು.ಶ್ರೀಧರ ಆಚಾರ್ಯ ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಶಶಾಂಕ್ ಬ್ಯೆಂದೂರು